ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.
TSK
TSK · 2 ಅರಸುಗಳು 21:6
Treasury of Scripture Knowledge references in ಕನ್ನಡ IRV.
¶ “‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ, ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.
ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.
ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.
ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.
¶ ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.
ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.
ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.
ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರ ಮಾಡಿದರು; ಇಗೋ, ನನ್ನ ಮಂದಿರದ ಒಳಗೆ ಇದನ್ನು ನಡೆಸಿದ್ದಾರೆ.
¶ ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.