¶ “ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,
TSK
TSK · 2 ಅರಸುಗಳು 22:13
Treasury of Scripture Knowledge references in ಕನ್ನಡ IRV.
¶ “ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.
ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.
¶ ಆದರೆ ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ನಮಗೋಸ್ಕರ ವಿಚಾರಿಸಬಲ್ಲವನಾದ ಒಬ್ಬ ಪ್ರವಾದಿಯು ಇಲ್ಲಿ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಾಯೇಲರ ಅರಸನ ಸೇವಕರಲ್ಲೊಬ್ಬನು ಅವನಿಗೆ, “ಶಾಫಾಟನ ಮಗನು, ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿಯು ಇಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.
¶ ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.
“ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.
ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡು ತಮ್ಮ ದೇವರಾದ ಯೆಹೋವನ ಧರ್ಮನಿಯಮಗಳ ಗ್ರಂಥವನ್ನು ಪಾರಾಯಣಮಾಡಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.
ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?
ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.
ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ,
“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.
ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.
ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.
¶ ಏಳನೆಯ ವರ್ಷದ, ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆ ಕೇಳುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.
ಕರ್ತನಾದ ನಮ್ಮ ದೇವರ ಮಾತನ್ನು ಕೇಳಲಿಲ್ಲ, ತನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಗೊತ್ತು ಮಾಡಿದ ಧರ್ಮಮಾರ್ಗದಲ್ಲಿ ನಡೆಯಲಿಲ್ಲ.
¶ ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
ಯಾಕೆಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.
ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.