¶ ಅದಕ್ಕೆ ಬಿಳಾಮನು ಬಾಲಾಕನ ಸೇವಕರಿಗೆ, “ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.
TSK
TSK · 2 ಪೇತ್ರನು 2:15
Treasury of Scripture Knowledge references in ಕನ್ನಡ IRV.
ಆಗ ಯೆಹೋವನು ಆ ಕತ್ತೆಗೆ ಮಾತನಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ” ಎಂದು ಕೇಳಿತು.
ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.
ಅದಕ್ಕೆ ಅವನು, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.
ಯಾಕೆಂದರೆ ಅವರು ಇಸ್ರಾಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು.
ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು.
ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.
(ಈ ಮನುಷ್ಯನು ತನ್ನ ದ್ರೋಹದ ಪ್ರತಿಫಲವಾಗಿ ಹೊಲವನ್ನು ಪಡೆದನು ಮತ್ತು ತಲೆಕೆಳಗಾಗಿ ಬಿದ್ದು ಹೊಟ್ಟೆ ಒಡೆದು ಕರುಳುಗಳೆಲ್ಲಾ ಹೊರಗೆ ಚೆಲ್ಲಿದವು.
ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.
‹ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.›‹ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ›‹ಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು›‹ಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.›