ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು.
TSK
TSK · 2 ಪೇತ್ರನು 2:9
Treasury of Scripture Knowledge references in ಕನ್ನಡ IRV.
ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.
ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.
ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.
ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.
ಹೇಗೆಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
¶ ಇಂಥವರ ವಿಷಯದಲ್ಲೇ ಆದಾಮನಿಂದ ಏಳನೆಯ ತಲೆಮಾರಿನವನಾದ ಹನೋಕನು ಸಹ, “ಇಗೋ, ಕರ್ತನು ತನ್ನ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು,