ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”
TSK
TSK · 2 ಪೇತ್ರನು 3:11
Treasury of Scripture Knowledge references in ಕನ್ನಡ IRV.
ಪುರದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಎಲ್ಲಾ ಫಿಲಿಷ್ಟಿಯರೇ, ಕರಗಿ ಹೋಗುವಿರಿ! ಉತ್ತರದಿಂದ ಹೊಗೆಯು ಬರುತ್ತದೆ. ಆ ವ್ಯೂಹದಲ್ಲಿ ಹಿಂದೆ ಬೀಳುವವರು ಯಾರೂ ಇಲ್ಲ.
ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು.
ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.
ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.
¶ ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
¶ ಯಾವನಾದರೂ ಭಿನ್ನವಾದ ಉಪದೇಶವನ್ನು ಮಾಡಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸ್ವಸ್ಥವಾದ ಮಾತುಗಳಿಗೂ, ಭಕ್ತಾನುಸಾರವಾದ ಉಪದೇಶಗಳಿಗೂ ಸಮ್ಮತಿಸದೆ ಹೋದರೆ,
¶ ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.
ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ.
¶ ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.
ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.