ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.
TSK
TSK · 2 ಪೇತ್ರನು 3:18
Treasury of Scripture Knowledge references in ಕನ್ನಡ IRV.
ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.
‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.
‹ಒಬ್ಬನೇ ಸತ್ಯ ದೇವರಾಗಿರುವ ನಿನ್ನನ್ನೂ ಮತ್ತು ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವವು.›
ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.
ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ.
ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,
¶ ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.
ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.
¶ ನಮ್ಮನ್ನು ತನ್ನ ಮಹಿಮೆಯಿಂದಲೂ, ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯಶಕ್ತಿಯು ನಮಗೆ ದೈವಿಕ ಪರಿಜ್ಞಾನವನ್ನು ಕೊಟ್ಟಿರುವುದರ ಮೂಲಕ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವನ್ನೂ ದಾನಮಾಡಲಾಗಿದೆಯೆಂದು ನಾವು ಬಲ್ಲೆವು.
ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.
ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.