ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಈ ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಈ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು” ಎಂದು ಹೇಳಿದನು.
TSK
TSK · 2 ಪೇತ್ರನು 3:9
Treasury of Scripture Knowledge references in ಕನ್ನಡ IRV.
ಮನುಷ್ಯರೊಳಗೆ ಒಬ್ಬನೂ ತನ್ನ ಸ್ನೇಹಿತನೊಡನೆ ಹೇಗೆ ಮಾತನಾಡುವನೋ ಹಾಗೆಯೇ ಯೆಹೋವನು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದನು. ಆನಂತರ ಮೋಶೆಯು ಪಾಳೆಯಕ್ಕೆ ಹಿಂತಿರುಗಿ ಬರುವನು. ಆದರೆ ನೂನನ ಮಗನಾದ ಯೆಹೋಶುವನೆಂಬ ಯೌವನಸ್ಥನಾದ ಅವನ ಶಿಷ್ಯನು ಆ ಗುಡಾರದಲ್ಲಿಯೇ ಇರುತ್ತಿದ್ದನು, ಅದರ ಬಳಿಯಿಂದ ದೂರ ಸರಿಯುತ್ತಿರಲಿಲ್ಲ.
ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.
ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”
‹ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ?›
ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.
ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.
ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.
‹ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು,›‹ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.›