TSK

TSK · 2 ಸಮುವೇಲನು 12:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಯೆಹೋವನು ನ್ಯಾಯವಂತನು. ನಾನೂ ನನ್ನ ಜನರೂ ದೋಷಿಗಳು.

¶ “‘ಮನುಷ್ಯನನ್ನು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.

ಆಗ ಸೌಲನು ಸಮುವೇಲನಿಗೆ, “ಏನು? ನಾನು ಯೆಹೋವನ ಮಾತನ್ನು ಕೇಳಲಿಲ್ಲವೋ? ಆತನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲಾ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದು ತಂದೆನು.

ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಾಯೇಲರ ಮುಂದೆಯೂ, ಜನರ ಮುಂದೆಯೂ ಹಿರಿಯರ ಮುಂದೆಯೂ ನನ್ನ ಮಾನವನ್ನುಳಿಸು. ನಾನು ನಿನ್ನ ದೇವರಾದ ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಬೇಡಿಕೊಂಡನು.

¶ ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಯೆಹೋವನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು, ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ” ಎಂದು ಬೇಡಿಕೊಂಡನು.

ಅಹಾಬನು ಎಲೀಯನನ್ನು ಕಂಡು ಅವನನ್ನು, “ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ” ಎಂದು ಕೇಳಲು ಅವನು, “ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.

¶ ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.

ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು.

ಮನುಷ್ಯರ ಮೇಲೆ ಕಾವಲಿಡುವವನೇ, ನಾನು ಪಾಪ ಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು? ನನ್ನನ್ನು ಶಿಕ್ಷೆಗೆ ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.

ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.

ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.

ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?

ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.

ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು,

ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.

ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.

¶ ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು.

ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,

¶ ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;

ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.

ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.