ನೀವಂತೂ ನನಗೆ ಕೇಡಾಗಬೇಕೆಂದು ಎಣಿಸಿದಿರಿ. ಆದರೆ ದೇವರು ನನ್ನನ್ನು ಮೇಲಾಗಬೇಕೆಂದು ಸಂಕಲ್ಪಿಸಿದನು; ಆದುದರಿಂದ ಇಂದು ನೀವು ಕಾಣುವಂತೆ, ಅನೇಕ ಜನರ ಪ್ರಾಣವು ಸಂರಕ್ಷಿಸಲ್ಪಟ್ಟಿತ್ತು” ಎಂದನು.
TSK
TSK · 2 ಸಮುವೇಲನು 16:10
Treasury of Scripture Knowledge references in ಕನ್ನಡ IRV.
ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.
ಅನಂತರ ಅರಸನು ಶಿಮ್ಮಿಗೆ, “ನಿನಗೆ ಮರಣದಂಡನೆ ಆಗುವುದಿಲ್ಲ” ಎಂದು ಪ್ರಮಾಣಮಾಡಿ ಹೇಳಿದನು.
ಕೊನೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಅವನಿಗೆ, ‘ನಾನು ಹೋಗಿ ಅವರನ್ನು ಪ್ರೇರೇಪಿಸುವೆನು’ ಅಂದಿತು.
ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? ‘ನೀನು ಏನು ಮಾಡುತ್ತಿ?’ ಎಂದು ಆತನನ್ನು ಕೇಳುವವರಾರು?
ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?
ಭೂನಿವಾಸಿಗಳೆಲ್ಲರೂ ಆತನ ದೃಷ್ಟಿಯಲ್ಲಿ ಶೂನ್ಯರಾಗಿ ಪರಲೋಕ ಸೈನ್ಯದವರಲ್ಲಿಯೂ, ಭೂಲೋಕದವರಲ್ಲಿಯೂ ತನ್ನ ಚಿತ್ತದ ಪ್ರಕಾರ ಮಾಡುತ್ತಾನೆ; ಆತನ ಶಕ್ತಿಯುತ ಕೈಯನ್ನು ತಡೆಹಿಡಿಯಲು ಸಾಧ್ಯವಿಲ್ಲ ‘ನೀನು ಏನು ಮಾಡುತ್ತೀ?’” ಎಂದು ಯಾರೂ ಕೇಳಲಾರರು.
ಆತನ ಶಿಷ್ಯರಾದ ಯಾಕೋಬ, ಯೋಹಾನರು ಇದನ್ನು ಕಂಡು, “ಕರ್ತನೇ, ಆಕಾಶದಿಂದ ಬೆಂಕಿಬಿದ್ದು ಇವರನ್ನು ನಾಶ ಮಾಡಲಿ ಎಂದು ನಾವು ಆಜ್ಞಾಪಿಸುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು,
ಎಲೋ ಮನುಷ್ಯನೇ ಹಾಗೆನ್ನಬೇಡ ದೇವರಿಗೆ ವಿರುದ್ಧವಾಗಿ ಮಾತನಾಡುವುದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ, “ಏಕೆ ನನ್ನನ್ನು ಹೀಗೆ ರೂಪಿಸಿದೆ”, ಎಂದು ಕೇಳುವುದುಂಟೇ?