ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.
TSK
TSK · 2 ಸಮುವೇಲನು 16:23
Treasury of Scripture Knowledge references in ಕನ್ನಡ IRV.
ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.
ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.
ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.
ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು.
¶ ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.
¶ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, ‹“ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.›
ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.
¶ ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.