ಯೆಹೋವನು ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು.
TSK
TSK · 2 ಸಮುವೇಲನು 19:43
Treasury of Scripture Knowledge references in ಕನ್ನಡ IRV.
¶ ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,
¶ ಆಗ ಯೆಹೂದ್ಯರೆಲ್ಲರೂ ಏಕಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, “ನೀನು ಮತ್ತು ನಿನ್ನ ಎಲ್ಲಾ ಸೇವಕರೂ ಹಿಂದಿರುಗಿ ಬನ್ನಿರಿ” ಎಂದು ಹೇಳಿಕಳುಹಿಸಿದರು.
ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ಕರೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿಜಡಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು” ಎಂದನು.
ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.
ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.
ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಾಡಿ, ಹರಕೊಂಡು, ತಿನ್ನುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.
ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.
ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.
ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.