ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ” ಎಂದು ಹೇಳಲು ಯೋವಾಬನು, “ಆಗಲಿ” ಅಂದನು.
TSK
TSK · 2 ಸಮುವೇಲನು 2:26
Treasury of Scripture Knowledge references in ಕನ್ನಡ IRV.
¶ ಅದಕ್ಕೆ ದಾವೀದನು ದೂತನಿಗೆ, “ನೀನು ಹೋಗು, ಇದಕ್ಕೋಸ್ಕರ ವ್ಯಸನಪಡಬೇಡ. ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ, ನಾಳೆ ಇನ್ನೊಬ್ಬನನ್ನು ನುಂಗುವುದು, ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬುದಾಗಿ ಅರಸನು ಆಜ್ಞಾಪಿಸುತ್ತಾನೆ ಎಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು” ಎಂದನು.
“ಎಷ್ಟರವರೆಗೆ ನನ್ನ ಆತ್ಮವನ್ನು ನೋಯಿಸಿ, ಮಾತುಗಳಿಂದ ನನ್ನನ್ನು ಜಜ್ಜುತ್ತಿರುವಿರಿ?
ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ, ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.
ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”
ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.
“ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ, ‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ.
ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.