ಆಗ ಆ ಗೂಢಚಾರರು “ನೀವು ನಮ್ಮ ವಿಷಯವನ್ನು ಬಹಿರಂಗ ಮಾಡದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ನಿನ್ನಲ್ಲಿ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ನಡೆದುಕೊಳ್ಳುವೆವು” ಅಂದರು.
TSK
TSK · 2 ಸಮುವೇಲನು 2:6
Treasury of Scripture Knowledge references in ಕನ್ನಡ IRV.
ಅರಸನು ಅವನಿಗೆ, “ಸೌಲನ ಕುಟುಂಬದಲ್ಲಿ ಯಾರಾದರೂ ಉಳಿದಿದ್ದರೆ ಹೇಳು, ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ” ಎಂದನು. ಆಗ ಚೀಬನು ಅರಸನಿಗೆ “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಒಬ್ಬ ಮಗನಿದ್ದಾನೆ” ಎಂದು ಹೇಳಿದನು.
ದಾವೀದನು, “ನಾಹಾಷನು ನನಗೆ ದಯೆತೋರಿಸಿದ್ದರಿಂದ, ನಾನು ಅವನ ಮಗ ಹಾನೂನನಿಗೂ ದಯೆತೋರಿಸುವೆನು” ಎಂದುಕೊಂಡು, ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕೋಸ್ಕರ ತನ್ನ ಪ್ರತಿನಿಧಿಗಳನ್ನು ಕಳುಹಿಸಿದನು. ದಾವೀದನ ಪ್ರತಿನಿಧಿಗಳು ಅಮ್ಮೋನಿಯರ ದೇಶಕ್ಕೆ ಬಂದರು.
ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.
‹ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು.›
¶ ‹“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.›
ಆದರೆ ಅವನಿಂದ ನಿನಗೆ ಏನಾದರೂ ನಷ್ಟವಾಗಿದ್ದರೆ ಅಥವಾ ಅವನು ನಿನಗೆ ಸಾಲವೇನಾದರೂ ತೀರಿಸಬೇಕಾಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು.