¶ ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ, ಅಬೀಷೈ, ಅಸಾಹೇಲ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.
TSK
TSK · 2 ಸಮುವೇಲನು 20:6
Treasury of Scripture Knowledge references in ಕನ್ನಡ IRV.
ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.
ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯ ಎದುರಿನಿಂದ ಓಡಿಹೋಗಿ, ಪಟ್ಟಣವನ್ನು ಪ್ರವೇಶಿಸಿದರು. ಯೋವಾಬನು ಅಮ್ಮೋನಿಯರೊಡನೆ ಯುದ್ಧ ಮಾಡುವುದನ್ನು ಬಿಟ್ಟು ಯೆರೂಸಲೇಮಿಗೆ ಹೋದನು.
ಅವನು ಸೈನ್ಯವನ್ನು ಮೂರು ಭಾಗ ಮಾಡಿ, ಒಂದು ಭಾಗವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನು ನಿಮ್ಮೊಂದಿಗೆ ಬರುತ್ತೇನೆ” ಎಂದು ಹೇಳಿದನು.
ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ಈ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು” ಎಂದು ಹೇಳಿದನು.
¶ ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು.
¶ ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.
‹ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು;›