¶ ಮರುದಿನದಲ್ಲಿ ಮೋಶೆಯು ಜನರಿಗೆ, “ನೀವು ಮಹಾ ಪಾಪವನ್ನು ಮಾಡಿರುವಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು. ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಪ್ರಾಯಶ್ಚಿತ್ತವನ್ನು ನಾನು ಮಾಡಬಹುದೇನೋ” ಎಂದು ಹೇಳಿದನು.
TSK
TSK · 2 ಸಮುವೇಲನು 21:3
Treasury of Scripture Knowledge references in ಕನ್ನಡ IRV.
“ಮನುಷ್ಯನು ಮನುಷ್ಯರಿಗೆ ಅಪರಾಧಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಆದರೆ ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ, ಯಾಕೆಂದರೆ ಯೆಹೋವನು ಅವರನ್ನು ನಾಶಮಾಡಲು ನಿರ್ಧರಿಸಿದ್ದನು.
ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು.
ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?
ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.