¶ ಆಗ ಮೋಶೆ ಇಸ್ರಾಯೇಲರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು.
TSK
TSK · 2 ಸಮುವೇಲನು 22:1
Treasury of Scripture Knowledge references in ಕನ್ನಡ IRV.
¶ ಅನಂತರ ದಾವೀದನು ಅರಣ್ಯದಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಅನಂತರ ಜೀಫ್ ಅರಣ್ಯದ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ಸೌಲನು ಪ್ರತಿದಿನ ಅವನನ್ನು ಹುಡುಕುತ್ತಿದ್ದರೂ ದೇವರು ಅವನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.
ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವತೆಗೆಯಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ.
¶ ದಾವೀದನು ತನ್ನ ಮನಸ್ಸಿನಲ್ಲಿ, “ನಾನು ಇಲ್ಲೇ ಇದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಸಾಯಲೇಬೇಕು ಆದ್ದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆ ಮೇಲೆ ಸೌಲನು ಇಸ್ರಾಯೇಲ್ಯರ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕದೆ ಬಿಟ್ಟುಬಿಡುವನು. ನಾನು ಅವನ ಕೈಗೆ ತಪ್ಪಿಸಿಕೊಂಡವನಾಗಿರುವೆನು” ಅಂದುಕೊಂಡನು.
ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಂದ ತಪ್ಪಿಸಿ ಉನ್ನತಪಡಿಸುತ್ತಿ. ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತಿ.
ಅವರು ನನ್ನ ವಿಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು, ಆಗ ಯೆಹೋವನು ನನಗೆ ಉದ್ಧಾರಕನಾದನು.
ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
ಯೆಹೋವನನ್ನು ಪ್ರೀತಿಸುತ್ತೇನೆ; ಆತನು ನನ್ನ ಮೊರೆಯನ್ನು ಕೇಳುವನು.
ಆತನು ನಮ್ಮನ್ನು ಅಂಥ ಭಯಂಕರ ಮರಣದಿಂದ ತಪ್ಪಿಸಿದನು. ಮುಂದೆಯೂ ತಪ್ಪಿಸುವನು. ನೀವು ನಮಗೋಸ್ಕರ ಪ್ರಾರ್ಥನೆ ಮಾಡುವುದರ ನಿಮಿತ್ತವಾಗಿ ಇನ್ನು ಮುಂದೆಯೂ ತಪ್ಪಿಸುವನೆಂದು ಆತನಲ್ಲಿ ನಿರೀಕ್ಷೆಯಿಟ್ಟವರಾಗಿದ್ದೇವೆ. ಹೀಗೆ ಅನೇಕರ ವಿಜ್ಞಾಪನೆಗಳಿಂದ ನಮಗೆ ದೊರಕುವ ಉಪಕಾರಕ್ಕಾಗಿ ನಮ್ಮ ನಿಮಿತ್ತ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿ ಉಂಟಾಗುವುದು.
¶ ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.