ಆನಂತರ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬುವವರು, “ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವನ್ನು ಸಲ್ಲಿಸಿರಿ. ಯೆಹೋವನೇ, ಸರ್ವಸ್ತುತಿ ಕೀರ್ತನೆಗಳಿಗೂ ಮೀಗಿಲಾಗಿರುವ ನಿನ್ನ ಮಹಾನಾಮಕ್ಕೆ ಮಹಿಮೆಯುಂಟಾಗಲಿ.
TSK
TSK · 2 ಸಮುವೇಲನು 22:4
Treasury of Scripture Knowledge references in ಕನ್ನಡ IRV.
ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.
ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.
ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ.
ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.
ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವುದು ಯಾರಿಂದಾದೀತು?
ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು.
ನಾನು ನಿನಗೆ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.
ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.
ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.