¶ ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು.
TSK
TSK · 2 ಸಮುವೇಲನು 23:16
Treasury of Scripture Knowledge references in ಕನ್ನಡ IRV.
ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.
ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.
ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ, ನಿಮ್ಮ ಹೃದಯಸಾರವನ್ನು ನೀರನ್ನೋ ಎಂಬಂತೆ ಕರ್ತನ ಸಮ್ಮುಖದಲ್ಲಿ ಹೊಯ್ದು ಬಿಡಿರಿ; ಪ್ರತಿಯೊಂದು ಬೀದಿಯ ಕೊನೆಕೊನೆಯಲ್ಲಿ ಹಸಿವೆಯಿಂದ ಮೂರ್ಛೆಹೋಗಿರುವ ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈಯೆತ್ತಿ ಪ್ರಾರ್ಥಿಸಿರಿ.”
ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.
ನಿಮ್ಮ ನಂಬಿಕೆಯೆಂಬ ಯಜ್ಞವನ್ನು ದೇವರಿಗರ್ಪಿಸುವ ಸೇವೆಯಲ್ಲಿ ನಾನೇ ಪಾನದ್ರವ್ಯವಾಗಿ ಅರ್ಪಿತವಾಗಬೇಕಾದರೂ ನನಗೆ ಸಂತೋಷವೇ, ನಿಮ್ಮೆಲ್ಲರೊಂದಿಗೂ ಸಂತೋಷ ಪಡುತ್ತೇನೆ.