TSK

TSK · 2 ಸಮುವೇಲನು 23:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು.

ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ. ಸ್ವಾಮಿಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ.

¶ ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, “ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ.

ಆದರೆ ಅವನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಆಕೆಯ ಮಾತನ್ನು ಕೇಳದೆ ಬಲಾತ್ಕಾರದಿಂದ ಆಕೆಯನ್ನು ಕೆಡಿಸಿದನು.

ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ

ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಬಲಪಡಿಸಿ, ತಾನು ವಾಗ್ದಾನ ಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈ ಹೊತ್ತೇ ಸಾಯಬೇಕು” ಎಂದು ಹೇಳಿದನು.

ನನ್ನ ಸೇವಕನಾದ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ ನೀನೂ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸುವುದಾದರೆ ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು. ಇಸ್ರಾಯೇಲ್ ರಾಜ್ಯವು ನಿನ್ನ ಪಾಲಾಗುವುದು.

ನಿನ್ನ ಆಯುಷ್ಕಾಲವು ಮುಗಿದು ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು.

ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.

ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವುದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವುದು.

ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನು ಉಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ, ಮಹೋನ್ನತವೂ ಆಗಿದೆ.

¶ ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.

ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.”

ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.

ಆಗ ನನ್ನ ದಾಸನಾದ ದಾವೀದನಿಗೂ, ನನ್ನ ಸೇವಕರಾಗಿರುವ ಲೇವಿಯರಾದ ಯಾಜಕರಿಗೂ ನಾನು ಮಾಡಿದ ನಿಬಂಧನೆಯು ನಿಂತು ಹೋಗಿ ದಾವೀದನ ಸಿಂಹಾಸನಾಸೀನನಾಗಿ ಆಳತಕ್ಕ ಅವನ ಸಂತಾನದವನೊಬ್ಬನೂ ಉಳಿಯದೆ ಹೋದಾನು.

ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.

¶ “ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.

ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.