TSK

TSK · 2 ಸಮುವೇಲನು 3:39

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಶೆಕೆಮಿನವರಿಗಾದರೋ ಅವರ ದುಷ್ಟತನವನ್ನು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.

ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.

ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.

ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ” ಎಂದನು.

ದಾವೀದನು ತನ್ನ ಮನಸ್ಸಿನಲ್ಲಿ ತನ್ನ ಮಗನಾದ ಸೊಲೊಮೋನನು ಎಳೆ ಪ್ರಾಯದವನಾಗಿದ್ದಾನೆ. ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯದ ಕೀರ್ತಿಯು ಎಲ್ಲಾ ದೇಶಗಳಲ್ಲಿ ಘನತೆಯನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾಗಿರಬೇಕು. ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವುದಕ್ಕೆ ಮೊದಲೇ ಎಲ್ಲಾ ಸಿದ್ಧತೆಗಳನ್ನು ಮಾಡಿದನು.

ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.

ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.

ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ, ಪ್ರತಿ ಮುಂಜಾನೆಯಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.

ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ, ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವುದು.

‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರ, ಪೆಕಹ ರೆಮಲ್ಯನ ಮಗನಾದ ಪೆಕಹನ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.’”

¶ ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.