¶ ಆಗ ದೇವರು ನೋಹನಿಗೆ, “ಎಲ್ಲಾ ಮನುಷ್ಯರಿಗೆ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅನ್ಯಾಯದಿಂದಲೂ ಹಿಂಸೆಯಿಂದಲೂ ತುಂಬಿದೆ; ನಾನು ಭೂಮಿಯೊಂದಿಗೆ ಅವರನ್ನೂ ಅಳಿಸಿ ಬಿಡುತ್ತೇನೆ.
TSK
TSK · 2 ಸಮುವೇಲನು 4:11
Treasury of Scripture Knowledge references in ಕನ್ನಡ IRV.
ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?
ನಾನು ಕೈಯನ್ನೆತ್ತಿ ನಿನ್ನನ್ನೂ, ನಿನ್ನ ಪ್ರಜೆಗಳನ್ನೂ, ವ್ಯಾಧಿಯಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.
¶ “‘ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.
ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.
ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಳ್ಳುವನು.
ದುಷ್ಟರಾದರೋ ದೇಶದೊಳಗಿಂದ ತೆಗೆದುಹಾಕಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.
ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.
ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.