TSK

TSK · 2 ಸಮುವೇಲನು 6:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.

“ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.

ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು.

¶ ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಮತ್ತು ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ಒಡಂಬಡಿಕೆ ಮಂಜೂಷವನ್ನು ಉತ್ಸಾಹದಿಂದ ತರುತ್ತಿರುವಾಗ,