ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.
TSK
TSK · 2 ಸಮುವೇಲನು 6:2
Treasury of Scripture Knowledge references in ಕನ್ನಡ IRV.
ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.
ಕಿರ್ಯಾತ್ಯಾರೀಮ್ ಅನಿಸಿಕೊಳ್ಳುವ ಕಿರ್ಯಾತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳು ಗ್ರಾಮಗಳು.
ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಫಿಲಿಷ್ಟಿಯರು ಯೆಹೋವನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿರಿ” ಎಂದು ಹೇಳಿದರು.
ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು.
ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.
ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲಿನ ಪರಿಶುದ್ಧನು!
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.