¶ ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.
TSK
TSK · 2 ಸಮುವೇಲನು 7:23
Treasury of Scripture Knowledge references in ಕನ್ನಡ IRV.
ನಾನು ಕೈಯನ್ನೆತ್ತಿ ನಿನ್ನನ್ನೂ, ನಿನ್ನ ಪ್ರಜೆಗಳನ್ನೂ, ವ್ಯಾಧಿಯಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.
ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.
ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು.
ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು?
ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.
ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.
ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು.
ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಭೂಲೋಕದಲ್ಲಿ ಯಾವುದಿರುತ್ತದೆ? ದೇವರಾದ ನೀನೇ ಚಿತ್ತೈಯಿಸಿ, ಅದನ್ನು ವಿಮೋಚಿಸಿ, ಸ್ವಪ್ರಜೆಯಾಗಿ ಮಾಡಿಕೊಂಡಿ. ಭಯಂಕರವಾದ ಮಹತ್ಕಾರ್ಯಗಳಿಂದ ನಿನ್ನ ಹೆಸರನ್ನು ಪ್ರಸಿದ್ಧಿಪಡಿಸಿದಿ. ನೀನು ಐಗುಪ್ತರ ಕೈಯೊಳಗಿಂದ ತಪ್ಪಿಸಿ ರಕ್ಷಿಸಿದ ನಿನ್ನ ಪ್ರಜೆಯ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿಬಿಟ್ಟಿ.
ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ, ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯ; ಅವು ಅಸಂಖ್ಯಾತವಾಗಿವೆ.
ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.
ಕೆಂಪು ಸಮುದ್ರದ ಬಳಿಯಲ್ಲಿ ಘೋರಕೃತ್ಯಗಳನ್ನೂ ನಡೆಸಿದ, ತಮ್ಮ ರಕ್ಷಕನಾದ ದೇವರನ್ನು ಮರೆತೇ ಬಿಟ್ಟರು.
ಮನುಷ್ಯರು ನಿನ್ನ ಭಯಂಕರ ಕೃತ್ಯಗಳಲ್ಲಿ ಕಂಡು ಬಂದ ಪ್ರತಾಪವನ್ನು ಕೊಂಡಾಡುವರು. ನಾನು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವೆನು.
ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು.
ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.
‘ಆದರೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಪಾರುಮಾಡುವೆನು ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ, ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.
ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.
¶ ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.