¶ ಯೆಹೋವನು ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ದೇಶದಲ್ಲೆಲ್ಲಾ ಹಬ್ಬಿತು.
TSK
TSK · 2 ಸಮುವೇಲನು 7:9
Treasury of Scripture Knowledge references in ಕನ್ನಡ IRV.
ಯೆಹೋವನು ಅವನ ಸಂಗಡ ಇದ್ದದರಿಂದ ದಾವೀದನು ಎಲ್ಲಾ ಕಾರ್ಯಗಳನ್ನು ವಿವೇಕದಿಂದ ನಡೆಸುತ್ತಿದ್ದನು.
ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ, ಅವನ ಆಯುಧವಾಹಕನು, ಎಲ್ಲಾ ಆಳುಗಳೂ ಅದೇ ದಿನದಲ್ಲಿ ಸತ್ತರು.
ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.
¶ ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಜಯ ಗೀತೆಯನ್ನು ರಚಿಸಿ ಹೀಗೆ ಹಾಡಿದನು:
ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ. ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ
ಭೂಮಿಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿ ಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು.
ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದುಕೊಳ್ಳುವೆನು; ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.
ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,
ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.