TSK

TSK · 2 ಸಮುವೇಲನು 8:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು” ಎಂದು ಉತ್ತರ ಕೊಟ್ಟನು.

ಆಗ ಅವನು ಯೋವಾಬನ ಸೈನಿಕರನ್ನೂ, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳನ್ನೂ ಎಲ್ಲಾ ಶೂರರನ್ನೂ ಕರೆದುಕೊಂಡು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕೋಸ್ಕರ ಯೆರೂಸಲೇಮಿನಿಂದ ಹೊರಟರು.

ಈ ಪರಾಕ್ರಮದ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.

ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್ ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ, ಕೆರೇತ್ಯ ಮತ್ತು ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.

ಯೆಹೋಯಾದಾವನ ಮಗನಾದ ಬೆನಾಯನು ಸೈನ್ಯಾಧಿಪತಿ. ಚಾದೋಕನೂ ಮತ್ತು ಎಬ್ಯಾತಾರನೂ ಯಾಜಕರು.

¶ ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.

ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು.