ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.
TSK
TSK · 2 ತಿಮೊಥೆಯನಿಗೆ 1:12
Treasury of Scripture Knowledge references in ಕನ್ನಡ IRV.
ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ.
ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು.
¶ ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.
ಅನ್ಯಜನರು ಈತನ ಹೆಸರನ್ನು ಕೇಳಿ ನಿರೀಕ್ಷೆಯಿಂದಿರುವರು.”
‹ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.›
‹ನನ್ನನ್ನು ಕಳುಹಿಸಿದಾತನ ಚಿತ್ತವು ಏನೆಂದರೆ, ಆತನು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ›‹ಅವರನ್ನು ಕಡೆ ದಿನದಲ್ಲಿ ಎಬ್ಬಿಸಬೇಕೆಂಬುದೇ.›
‹ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದೇ ಇಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.›
‹ಇವರನ್ನು ಲೋಕದಿಂದ ತೆಗೆಯಬೇಕೆಂದು ನಾನು ಬೇಡಿಕೊಳ್ಳುವುದಿಲ್ಲ, ಆದರೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.›
‹ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು”› ಎಂದು ಹೇಳಿದನು.
ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.
ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.
ಆದರೆ ಆತನು; ‹‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’”› ಹೇಳಿದನು.
ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.
ಮತ್ತೊಮ್ಮೆ, ಯೆಶಾಯನು ಹೇಳುವುದೇನಂದರೆ, “ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.”
ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.
ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.
ಆತನನ್ನೂ ಆತನ ಪುನರುತ್ಥಾನದಲ್ಲಿರುವ ಶಕ್ತಿಯನ್ನೂ, ಆತನ ಬಾಧೆಗಳಲ್ಲಿ ಪಾಲುಗಾರನಾಗಿರುವ ಪದವಿಯನ್ನೂ ತಿಳಿದುಕೊಂಡು ಆತನ ಮರಣದ ವಿಷಯದಲ್ಲಿ ಆತನಂತೆ ರೂಪಾಂತರಗೊಳ್ಳಬೇಕೆಂಬುದೇ ನನ್ನ ಬಯಕೆಯಾಗಿದೆ.
ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.
¶ ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.
ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
¶ ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು, ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ,
ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.
ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.
ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.
ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.
¶ ಮುಗ್ಗರಿಸದಂತೆ ನಿಮ್ಮನ್ನು ಕಾಪಾಡಿಕೊಳ್ಳುತ್ತಾ, ತನ್ನ ಮಹಿಮೆಯ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ, ಅತ್ಯಂತ ಹರ್ಷದೊಡನೆ ನಿಲ್ಲಿಸುವುದಕ್ಕೂ ಶಕ್ತನಾಗಿರುವ,