TSK

TSK · 2 ತಿಮೊಥೆಯನಿಗೆ 2:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನ ಸೇವಕನಾದ ಮೋಶೆಯ ಮರಣದ ನಂತರ ಯೆಹೋವನು ಮೋಶೆಯ ಸೇವಕನಾದ ನೂನನ ಮಗನಾದ ಯೆಹೋಶುವನಿಗೆ

ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.

ಈತನು ಜಗಳವಾಡುವುದಿಲ್ಲ, ಕೂಗಾಡುವುದಿಲ್ಲ. ಬೀದಿಗಳಲ್ಲಿ ಈತನ ಧ್ವನಿಯು ಯಾರಿಗೂ ಕೇಳಿಸುವುದಿಲ್ಲ.

ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಅವರಿಗೆ ಎದುರಾಗಿ ಬಂದು, ‘ಜನರೇ, ನೀವು ಸಹೋದರರಲ್ಲವೇ, ನೀವೇಕೆ ಒಬ್ಬರಿಗೊಬ್ಬರು ಅನ್ಯಾಯ ಮಾಡುತ್ತೀರಿ?’ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಲು ಬಂದನು.

¶ ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು.

ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.

ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.

ಆದರೆ ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ.

¶ ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.

ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ,

ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.

¶ ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.

ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ.

¶ ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.