TSK

TSK · 2 ತಿಮೊಥೆಯನಿಗೆ 2:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಸೈತಾನನಿಗೆ, “ನೋಡು, ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ. ಆದರೆ ಅವನ ಮೈಮೇಲೆ ಮಾತ್ರ ಕೈಹಾಕಬೇಡ” ಎಂದು ಅಪ್ಪಣೆಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.

ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.

ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.

ಯೆಹೋವನು ಹೀಗೆನ್ನುತ್ತಾನೆ, “ಶೂರನ ಸೆರೆಯವರೂ ಅಪಹರಿಸಲ್ಪಡುವರು. ಭಯಂಕರನ ಕೊಳ್ಳೆಯೂ ತೆಗೆಯಲ್ಪಡುವುದು. ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು.

‹ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮ ಹತ್ತಿರಕ್ಕೆ ಬಂದಿತಲ್ಲಾ?›

‹ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.›

ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.

ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?

ಗಂಭೀರವಾಗಿ ಯೋಚಿಸಿರಿ! ನೀತಿವಂತರಾಗಿ ಎಚ್ಚರದಿಂದಿರಿ. ಪಾಪಮಾಡಬೇಡಿರಿ. ಕೆಲವರಿಗೆ ದೇವರ ಕುರಿತಾಗಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.

ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.

ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,

ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನ್ನಿಸಿಕೊಂಡಿರಬೇಕು, ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ತಂತ್ರಗಳೊಳಗೆ ಸಿಕ್ಕಿಬಿದ್ದಾನು.

ಕೇಡುಕಿನ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ಪೊಳ್ಳು ಮಾತುಗಳನ್ನಾಡಿ ಕೆಟ್ಟ ಕಾಮಾಭಿಲಾಷೆ ಹುಟ್ಟಿಸಿ ಅತಿಯಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.

ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.