ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
TSK
TSK · 2 ತಿಮೊಥೆಯನಿಗೆ 3:5
Treasury of Scripture Knowledge references in ಕನ್ನಡ IRV.
ಸ್ವರವೆತ್ತಿ ಕೂಗು, ಸಂಕೋಚಪಡಬೇಡ, ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು.
¶ ‹“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.›
ತಿಳಿವಳಿಕೆಯಿಲ್ಲದವರಿಗೆ ಶಿಕ್ಷಕನೂ, ಬಾಲಕರಿಗೆ ಉಪಾಧ್ಯಾಯನೂ, ಆಗಿದ್ದೇನೆಂದು ನಂಬಿಕೊಂಡಿದ್ದಿಯೇ,
ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,
ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.
ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.
ಸಭೆಯಲ್ಲಿ ಭಿನ್ನಭೇದಗಳನ್ನುಂಟುಮಾಡುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟು ಬಿಡು;