¶ ಆ ಅಂಕುರದ ಮೇಲೆ ಜ್ಞಾನ ವಿವೇಕದಾಯಕ ಆತ್ಮ, ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳಿವಳಿಕೆಯನ್ನೂ ಮತ್ತು ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವುದು.
TSK
TSK · ಅಪೊಸ್ತಲರ ಕೃತ್ಯಗ 1:2
Treasury of Scripture Knowledge references in ಕನ್ನಡ IRV.
ನನ್ನ ಬಳಿಗೆ ಬಂದು ಇದನ್ನು ಕೇಳಿರಿ, ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
¶ ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
‹ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.›
¶ ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು.
ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂದು ಹೆಸರಿಟ್ಟನು.
ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು.
¶ ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.
‹ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?›
¶ ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.
‹ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ. ನಾನು ಆರಿಸಿಕೊಂಡವರೆಲ್ಲರನ್ನು ನಾನು ಬಲ್ಲೆನು. ಆದರೆ›‹ನನ್ನ ಜೊತೆಯಲ್ಲಿ ಊಟಮಾಡುವವನೇ, ನನಗೆ ದ್ರೋಹ ಬಗೆದನು, ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.›
¶ ‹“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ›‹ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.›
ಯೇಸು ಅವರಿಗೆ, ‹“ನಿಮಗೆ ಸಮಾಧಾನವಾಗಲಿ”› ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.
“ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು” ಎಂದು ಹೇಳಿದರು.
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.
¶ ಮನುಷ್ಯರಿಂದಾಗಲಿ ಮನುಷ್ಯರ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನು ಹಾಗೂ
ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”
ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ವಿಶ್ವಾಸಾರ್ಹವಾದದ್ದೂ ಸ್ಥಿರವಾದದ್ದೂ ಆದ ಲಂಗರವಾಗಿದೆ. ಅದು ಅತಿ ಪರಿಶುದ್ಧ ಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದಾಗಿದೆ.
ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.
¶ ಯೇಸು ಕ್ರಿಸ್ತನ ಪ್ರಕಟನೆಯು, ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟಣೆಯನ್ನು ಹೊಂದಿದನು. ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ತಿಳಿಸಿದನು.
‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು›‹ಕಿವಿಯುಳ್ಳವನು ಕೇಳಲಿ.›‹ಜಯಹೊಂದುವವನಿಗೆ›‹ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.›
‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.›
‹ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.›
ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.