TSK

TSK · ಅಪೊಸ್ತಲರ ಕೃತ್ಯಗ 10:22

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಮತ್ತು “ಇದು ಸಮುದ್ರದ ಆಚೆ ಇರುವ ಮಾತಲ್ಲ. ನಮಗೋಸ್ಕರ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡುಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದರೆ ನಾವು ಕೈಕೊಂಡೇವು” ಅಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.

ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.

ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.

ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.

¶ ಅರಿಮಥಾಯ ಎಂಬ ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫನ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಅನುಮತಿಸಿರಲಿಲ್ಲ.

‹ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.›

‹ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಾನು ಕಳುಹಿಸಿದಾತನನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ.”›

¶ ‹“ಆದರೆ ಇವರಿಗೋಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನನ್ನು ನಂಬುವವರಿಗೋಸ್ಕರವಾಗಿಯೂ ನಿನ್ನನ್ನು ಬೇಡಿಕೊಳ್ಳುತ್ತೇನೆ.›

ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.

ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು.

¶ “ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ದೈವಭಕ್ತನೂ, ಆ ಸ್ಥಳದ ಯೆಹೂದ್ಯರೆಲ್ಲರಿಂದ

ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.

ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;

ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”

ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,

ದೇಮೇತ್ರಿಯನು ಎಲ್ಲರಿಂದಲೂ, ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ. ಅಲ್ಲದೆ ಸಾಕ್ಷಿಹೊಂದಿದವನಾಗಿದ್ದಾನೆ. ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ.