ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
TSK
TSK · ಅಪೊಸ್ತಲರ ಕೃತ್ಯಗ 10:31
Treasury of Scripture Knowledge references in ಕನ್ನಡ IRV.
“ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.
ಆ ಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ, ನೀನು ದೈವಸಂಕಲ್ಪವನ್ನು ವಿಮರ್ಶಿಸುವುದಕ್ಕೂ, ನಿನ್ನನ್ನು ನಿನ್ನ ದೇವರ ಮುಂದೆ ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ವಿಜ್ಞಾಪನೆಯು ದೇವರಿಗೆ ಮುಟ್ಟಿತು; ಆ ವಿಜ್ಞಾಪನೆಯ ನಿಮಿತ್ತವೇ ನಾನು ಬಂದೆನು.
ಅವನು ಆ ದೂತನನ್ನು ದೃಷ್ಟಿಸಿನೋಡಿ ಭಯಹಿಡಿದವನಾಗಿ; “ಕರ್ತನೇ, ಇದೇನು?” ಎಂದು ಕೇಳಲು, ಆ ದೂತನು ಅವನಿಗೆ; “ನಿನ್ನ ಪ್ರಾರ್ಥನೆಗಳೂ, ನಿನ್ನ ದಾನಧರ್ಮಗಳೂ ದೇವರ ಸನ್ನಿಧಿಗೆ ಜ್ಞಾಪರ್ಥಕವಾಗಿ ಬಂದು ತಲುಪಿದೆ.
ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.
¶ ಅನಂತರ ಮತ್ತೊಬ್ಬ ದೇವದೂತನು ಬಂದನು, ಅವನು ಚಿನ್ನದ ಧೂಪಾರತಿ ಹಿಡಿದುಕೊಂಡು ಯಜ್ಞವೇದಿಯ ಬಳಿಯಲ್ಲಿ ನಿಂತನು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧ ಜನರೆಲ್ಲರ ಪ್ರಾರ್ಥನೆಗಳೊಂದಿಗೆ ಸಮರ್ಪಿಸುವುದಕ್ಕಾಗಿ ಅವನಿಗೆ ಬಹಳ ಧೂಪವು ಕೊಡಲ್ಪಟ್ಟಿತು.