‹ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.›
TSK
TSK · ಅಪೊಸ್ತಲರ ಕೃತ್ಯಗ 10:42
Treasury of Scripture Knowledge references in ಕನ್ನಡ IRV.
‹ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.›
ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು,
‹ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ”› ಅಂದನು.
“ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.
ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.
ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ.
ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
¶ ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.
¶ ‹“ನೋಡು! ನಾನು ಬೇಗನೇ ಬರುತ್ತೇನೆ.›‹ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ›‹ಪ್ರತಿಫಲವು ನನ್ನಲ್ಲಿದೆ.›