TSK

TSK · ಅಪೊಸ್ತಲರ ಕೃತ್ಯಗ 10:43

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.

ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.

ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.

¶ ಯೇಸು ಅವರಿಗೆ, ‹“ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,›

ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.

‹ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.›

ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.

ನೀವು ನೋಡುತ್ತಿರುವಂತಹ, ನಿಮಗೆ ಗುರುತಿರುವಂತಹ ಈ ಮನುಷ್ಯನು ಗುಣವಾಗುವುದಕ್ಕೆ ಯೇಸುವಿನ ಹೆಸರಿನಲ್ಲಿ ಇಟ್ಟ ಅವನ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಸಂಪೂರ್ಣಸೌಖ್ಯವನ್ನು ಕೊಟ್ಟಿತು.

ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.

ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.

ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.

ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.

ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?

ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.

ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.