ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಯ ಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.
TSK
TSK · ಅಪೊಸ್ತಲರ ಕೃತ್ಯಗ 10:9
Treasury of Scripture Knowledge references in ಕನ್ನಡ IRV.
ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”
¶ ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು
‹ನೀನು ಪ್ರಾರ್ಥನೆಮಾಡುವಾಗ›‹ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.›
‹ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ,›
¶ ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.
ನಾವಾದರೋ ಪ್ರಾರ್ಥನೆಯನ್ನೂ, ವಾಕ್ಯೋಪದೇಶವನ್ನೂ ಮಾಡುವುದರಲ್ಲಿ ನಿರತರಾಗಿರುವೆವು” ಎಂದು ಹೇಳಿದರು.
ಹೇಳಿದ್ದೇನಂದರೆ; “ನಾನು ಯೊಪ್ಪ ಎಂಬ ಪಟ್ಟಣದಲ್ಲಿ ಪ್ರಾರ್ಥನೆಮಾಡುತ್ತಾ ಧ್ಯಾನಪರವಶನಾಗಿದ್ದ ನನಗೆ ಒಂದು ದರ್ಶನವಾಯಿತು” ಅದೇನೆಂದರೆ, ಆಕಾಶದಿಂದ ನಾಲ್ಕು ಮೂಲೆಗಳನ್ನು ಹಿಡಿದು ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ನಾನಿದ್ದಲ್ಲಿಗೆ ಇಳಿದು ಬಂದಿತು.
¶ ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.