ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
TSK
TSK · ಅಪೊಸ್ತಲರ ಕೃತ್ಯಗ 11:1
Treasury of Scripture Knowledge references in ಕನ್ನಡ IRV.
ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ.
¶ ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು.
ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು.
ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”
ಜನಾಂಗಗಳು ನಿನ್ನ ಬೆಳಕಿಗೆ ನೆರೆದು ಬರುವವು, ಅರಸರೂ ನಿನ್ನಲ್ಲಿನ ಉದಯಪ್ರಕಾಶಕ್ಕೆ ಸೇರುವರು.
¶ ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು.
¶ “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.
ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.
“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.
¶ ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
ಅಲ್ಲಿ ಸಭೆಯನ್ನು ಕೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳೆಲ್ಲವನ್ನೂ, ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲು ತೆರೆದದ್ದನ್ನೂ ವಿವರವಾಗಿ ಅವರಿಗೆ ತಿಳಿಸಿದರು.
ಆದ್ದರಿಂದ ಕ್ರಿಸ್ತನು ನಿಮ್ಮನ್ನು ಸೇರಿಸಿಕೊಂಡಂತೆ ನೀವು ಸಹ ಒಬ್ಬರನ್ನೊಬ್ಬರು ಸೇರಿಸಿಕೊಂಡು ದೇವರನ್ನು ಮಹಿಮೆಪಡಿಸಿರಿ.