ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.
TSK
TSK · ಅಪೊಸ್ತಲರ ಕೃತ್ಯಗ 11:14
Treasury of Scripture Knowledge references in ಕನ್ನಡ IRV.
ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.
ಇಸ್ರಾಯೇಲನ ಮನೆತನದವರನ್ನು ಆಶೀರ್ವದಿಸುವನು; ಆರೋನನ ಮನೆತನದವರನ್ನು ಆಶೀರ್ವದಿಸುವನು. ತನ್ನ ಭಕ್ತರನ್ನು ಆಶೀರ್ವದಿಸುವನು.
ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.
‹ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.›
ಆಗ ‹“ನಿನ್ನ ಮಗನು ಬದುಕುತ್ತಾನೆ”› ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.
ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.
ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.
ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.
ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.
ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪ ಕ್ಷಮಾಪಣೆಯನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿ ಹೇಳಿದ್ದಾರೆ” ಅಂದನು.
ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ,
¶ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.
ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದ್ದೇನೆ ಇದನ್ನು ಹೊರತು ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ತೋರುವುದಿಲ್ಲ.