ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ, ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ?
TSK
TSK · ಅಪೊಸ್ತಲರ ಕೃತ್ಯಗ 12:23
Treasury of Scripture Knowledge references in ಕನ್ನಡ IRV.
ಆ ರಾತ್ರಿ ನಾನು ಐಗುಪ್ತದೇಶದ ಮೇಲೆ ಹಾದುಹೋಗಿ ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ, ಚೊಚ್ಚಲಾಗಿರುವುದನ್ನೆಲ್ಲಾ ಸಂಹರಿಸುವೆನು. ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ನ್ಯಾಯತೀರಿಸುವೆನು. ನಾನೇ ಯೆಹೋವನು.
¶ ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.
ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.
¶ ಆಗ ಯೆಹೋವನು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದನು. ಅವರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.
ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.
ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು.
ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.
ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದ್ಡೀ? ಯಾರ ವಿರುದ್ಧವಾಗಿ ಬಾಯ್ದೆರೆದು ಧ್ವನಿಯೆತ್ತಿದ್ದೀ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲರ ಸದಮಲಸ್ವಾಮಿಯನ್ನಲ್ಲವೇ!’
“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”
ನೀನು ನಿನ್ನನ್ನು ಸಂಹರಿಸುವವರ ಎದುರಿಗೆ ನಾನು ದೇವರು ಎಂದು ಹೇಳುವೆಯೋ? ನಿನ್ನನ್ನು ಸಂಹರಿಸುವವನ ಕೈಯಲ್ಲಿ ನೀನು ದೇವರಲ್ಲ, ನರಪ್ರಾಣಿಯೇ.
ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.
‹ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.›
ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ಜನರ ಗುಂಪಿನೊಳಗೆ ನುಗ್ಗಿ ಹೀಗೆಂದು ಕೂಗಿ ಹೇಳಿದರು;