ಅವನು ಮೊರ್ದೆಕೈಯೊಬ್ಬನ ಮೇಲೆಯೇ ಕೈಯೆತ್ತುವುದು ಸಾಲದೆಂದೆಣಿಸಿ, ಇವನು ಯೆಹೂದ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಮೊರ್ದೆಕೈಯ ಬಂಧುಬಳಗದವರನ್ನು ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಬೇಕೆಂದು ನಿರ್ಣಯಿಸಿಕೊಂಡನು.
TSK
TSK · ಅಪೊಸ್ತಲರ ಕೃತ್ಯಗ 12:4
Treasury of Scripture Knowledge references in ಕನ್ನಡ IRV.
ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.
ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?
“ಆದರೂ ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು” ಎಂದು ಮಾತನಾಡಿಕೊಂಡರು.
‹ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು, ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು.›
¶ ಸೀಮೋನ್ ಪೇತ್ರನು ಆತನಿಗೆ, “ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ?” ಎಂದು ಕೇಳಿದ್ದಕ್ಕೆ ಯೇಸು ಅವನಿಗೆ, ‹“ನಾನು ಹೋಗುವ ಕಡೆಗೆ, ಈಗ ನೀನು ನನ್ನನ್ನು ಹಿಂಬಾಲಿಸಲಾರೆ. ಅನಂತರ ನೀನು ನನ್ನನ್ನು ಹಿಂಬಾಲಿಸುವೆ”› ಎಂದನು.
‹“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟಬಂದ ಕಡೆಗೆ ತಿರುಗಾಡುತ್ತಿದ್ದೀ. ಆದರೆ ನೀನು ಮುದುಕನಾದಾಗ ನಿನ್ನ ಕೈಗಳನ್ನು ಚಾಚುವಿ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು”› ಎಂದು ಹೇಳಿದನು.
ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.
ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.