TSK

TSK · ಅಪೊಸ್ತಲರ ಕೃತ್ಯಗ 12:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಸ್ಥಳಕ್ಕೆ ಅಬ್ರಹಾಮನು “ಯೆಹೋವ ಯೀರೆ” ಎಂದು ಹೆಸರಿಟ್ಟನು. ಯೆಹೋವನು ಬೆಟ್ಟದಲ್ಲಿ ಒದಗಿಸುವನು ಎಂಬುದಾಗಿ ಇಂದಿನವರೆಗೂ ಹಾಗೆ ಹೇಳುವ ಪದ್ಧತಿ ಇದೆ.

ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ, ಅವನ ಜನರೂ ಬಂದು ಅವರನ್ನು ಮುತ್ತಿಗೆ ಹಾಕುವುದಕ್ಕಿದ್ದರು.

ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.

ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರಬೇಕೆಂದು ನಿನಗೆ ಮನಸ್ಸಿದ್ದರೆ ಬಾ; ನಿನ್ನನ್ನು ಕಟಾಕ್ಷಿಸುವೆನು; ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದೆ ಹೋದರೆ ನಿಂತುಬಿಡು; ಇಗೋ, ದೇಶವೆಲ್ಲಾ ನಿನ್ನ ಕಣ್ಣೆದುರಿಗಿದೆ; ನಿನಗೆ ಯಾವ ಕಡೆ ಹೋಗುವುದು ಸರಿಯೋ ಒಳ್ಳೆಯದೋ ಆ ಕಡೆ ಹೋಗು” ಎಂದು ಹೇಳಿದನು.

“ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.

ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.

ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.

ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.