TSK

TSK · ಅಪೊಸ್ತಲರ ಕೃತ್ಯಗ 12:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕನ್ನು ಕೊಟ್ಟು ನನ್ನ ಕತ್ತಲನ್ನು ಪರಿಹರಿಸುವನು.

ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ” ಎಂದನು.

ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.

ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.

ನನ್ನ ಕೂಗನ್ನು ಲಾಲಿಸು, ಬಲು ಕುಗ್ಗಿಹೋಗಿದ್ದೇನೆ. ಹಿಂಸಕರ ಕೈಯಿಂದ ನನ್ನನ್ನು ತಪ್ಪಿಸು, ಅವರು ನನಗಿಂತ ಬಲಿಷ್ಠರಾಗಿದ್ದಾರಲ್ಲಾ.

ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.

ಇಗೋ! ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವದಿಕ್ಕಿನ ಮಾರ್ಗವಾಗಿ ಬಂದಿತ್ತು ಮತ್ತು ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ಮಹಿಮೆಯಿಂದ ಭೂಮಿಯು ಪ್ರಕಾಶಿಸುತ್ತಿತ್ತು.

ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.

ಆತನ ತೇಜಸ್ಸು ಸೂರ್ಯನಂತಿದೆ, ಆತನ ಕೈಗಳಿಂದ ಕಿರಣಗಳು ಹೊರಹೊಮ್ಮುತ್ತಿವೆ, ಆತನು ಶಕ್ತಿ ಸಾಮರ್ಥ್ಯಗಳ ನಿಧಿ.

ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು.

ಆತನನ್ನು ದೇವರು ಮರಣದ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು; ಏಕೆಂದರೆ ಮರಣವು ಆತನನ್ನು ಹಿಡಿದುಕೊಂಡಿರುವುದು ಅಸಾಧ್ಯವಾಗಿತ್ತು.

ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು, ಫಕ್ಕನೆ ಆಕಾಶದಿಂದ ಒಂದು ಬೆಳಕು ಅವನ ಸುತ್ತಲು ಮಿಂಚಿತು.

¶ ಹೆರೋದನು ಅವನನ್ನು ಜನರ ಮುಂದೆ ತರಿಸಬೇಕೆಂದಿದ್ದ ದಿನದ ಹಿಂದಿನ ರಾತ್ರಿಯಲ್ಲಿ, ಪೇತ್ರನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟವನಾಗಿ, ಇಬ್ಬರು ಸಿಪಾಯಿಗಳ ನಡುವೆ ನಿದ್ದೆಮಾಡುತ್ತಿದ್ದನು. ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯುತ್ತಿದ್ದರು.

ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.

ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.

¶ ಇದಾದ ನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನ ತೇಜಸ್ಸಿನ ಪ್ರಭಾವದಿಂದ ಭೂಮಿಯು ಪ್ರಕಾಶವಾಯಿತು.