TSK

TSK · ಅಪೊಸ್ತಲರ ಕೃತ್ಯಗ 13:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.

ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.

ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.

ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.