TSK

TSK · ಅಪೊಸ್ತಲರ ಕೃತ್ಯಗ 13:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.

¶ ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.

¶ ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.

ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.

ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.