TSK

TSK · ಅಪೊಸ್ತಲರ ಕೃತ್ಯಗ 13:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.

ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.

ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ; ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ.

ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ; ಯೆಹೋವನ ಭಕ್ತರೇ, ಯೆಹೋವನನ್ನು ಕೊಂಡಾಡಿರಿ.

ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ?

¶ “ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.

ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.

ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.

¶ ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.

ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.

¶ ಅಲ್ಲಿಯವರೆಗೆ ಪೌಲನ ಮಾತುಗಳನ್ನು ಅವರು ಕೇಳಿಸಿಕೊಳ್ಳುತ್ತಿದ್ದರು. ಆನಂತರ; “ಇಂಥವನನ್ನು ಭೂಮಿಯಿಂದ ತೆಗೆದುಹಾಕಿಬಿಡು; ಇವನು ಬದುಕುವುದು ಯುಕ್ತವಲ್ಲವೆಂದು” ಕೂಗಿ ಹೇಳಿದರು.

‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು›‹ಕಿವಿಯುಳ್ಳವನು ಕೇಳಲಿ.›‹ಜಯಹೊಂದುವವನಿಗೆ›‹ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.›

‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.›