ನನ್ನ ಪವಿತ್ರತ್ವದಲ್ಲಿ ಆಣೆಯಿಟ್ಟು ಒಂದು ಸಂಗತಿಯನ್ನು ಹೇಳಿದ್ದೇನೆ; ಅದರ ವಿಷಯದಲ್ಲಿ ನಾನು ದಾವೀದನಿಗೆ ಸುಳ್ಳುಗಾರನಾಗುವುದಿಲ್ಲ.
TSK
TSK · ಅಪೊಸ್ತಲರ ಕೃತ್ಯಗ 13:23
Treasury of Scripture Knowledge references in ಕನ್ನಡ IRV.
¶ ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?
ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಾಂತಿಯ ಸ್ಥಳವು ವೈಭವವುಳ್ಳದ್ದಾಗಿರುವುದು.
ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.
ಆ ದಿನಗಳಲ್ಲಿ, ಆ ಕಾಲದಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು; ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಗಳನ್ನು ನಿರ್ವಹಿಸುವನು.
¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.
‹“ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?”› ಎಂದು ಕೇಳಿದ್ದಕ್ಕೆ
ತನ್ನ ಸೇವಕನಾದ ದಾವೀದನ ಮನೆತನದಲ್ಲಿ, ನಮಗೋಸ್ಕರ ಒಬ್ಬ ರಕ್ಷಣಾವೀರನನ್ನು ಎಬ್ಬಿಸಿದ್ದಾನೆ.
ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.
ಆದಕಾರಣ ಅವನು ಪ್ರವಾದಿಯಾಗಿದ್ದು, ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿದನು.
ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು.
ನೀವು ಮರದ ಕಂಬಕ್ಕೆ ತೂಗಹಾಕಿ ಕೊಂದ ಯೇಸುವನ್ನು ನಮ್ಮ ಪೂರ್ವಿಕರ ದೇವರು ಎಬ್ಬಿಸಿದನು.
ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.
ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ.
ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.
ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.
ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳ ಮೂಲಕ ನಿಮಗೆ ತಿಳಿಸಿಕೊಡುತ್ತಾ ನಿಮ್ಮ ನಿರ್ಮಲವಾದ ಮನಸ್ಸನ್ನು ಎಚ್ಚರಗೊಳಿಸುತ್ತಿದ್ದೇನೆ.
ತಂದೆಯು ತನ್ನ ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ತಿಳಿದಿದ್ದೇವೆ ಮತ್ತು ಅದರ ವಿಷಯದಲ್ಲಿ ನಾವು ಸಾಕ್ಷಿ ಹೇಳುತ್ತೇವೆ.
¶ ‹“ಯೇಸುವೆಂಬ ನಾನು›‹ನನ್ನ ಸಭೆಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವುದಕ್ಕೆ›‹ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು›‹ದಾವೀದನ ವಂಶವೆಂಬ ಬುಡದಿಂದ ಹುಟ್ಟಿದ ಬೇರೂ›‹ಅವನ ಸಂತತಿಯೂ›‹ಪ್ರಕಾಶಮಾನವಾದ ಉದಯ ನಕ್ಷತ್ರವೂ ಆಗಿದ್ದೇನೆ.”›