ನಾನಂತೂ ಮಾನಸಾಂತರಕ್ಕಾಗಿ ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನ್ನ ನಂತರ ಬರುವವನು ನನಗಿಂತ ಶಕ್ತನು; ಆತನ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾತ್ಮನಲ್ಲಿಯೂ ಬೆಂಕಿಯಲ್ಲಿಯೂ ನಿಮಗೆ ದೀಕ್ಷಾಸ್ನಾನಮಾಡಿಸುವನು.
TSK
TSK · ಅಪೊಸ್ತಲರ ಕೃತ್ಯಗ 13:25
Treasury of Scripture Knowledge references in ಕನ್ನಡ IRV.
ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು.
ಅವನು ಮರೆಮಾಡದೆ ಎಲ್ಲರ ಮುಂದೆ, “ನಾನು ಕ್ರಿಸ್ತನಲ್ಲ,” ಎಂದು ಹೇಳಿದನು.
¶ ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.
ಆಗ ಅಲ್ಲಿ ಯೇಸು ಹೋಗುತ್ತಿರುವುದನ್ನು ನೋಡಿ, ಯೋಹಾನನೂ ಅಗೋ, “ಯಜ್ಞಕ್ಕೆ ದೇವರು ನೇಮಿಸಿರುವ ಕುರಿಮರಿ” ಎಂದು ಹೇಳಿದನು.
ಯೇಸು ಅವರಿಗೆ ‹“ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.›
¶ ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, ‹“ನನಗೆ ನೀರಡಿಕೆಯಾಗಿದೆ”› ಎಂದನು.
ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,
ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.
¶ ಅವರು ತಮ್ಮ ಸಾಕ್ಷಿಗಳನ್ನು ಹೇಳಿ ಮುಗಿಸಿದ ನಂತರ, ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವುದು.