TSK

TSK · ಅಪೊಸ್ತಲರ ಕೃತ್ಯಗ 13:36

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಸೌಲನ ಆಳ್ವಿಕೆಯಲ್ಲಿ ಇಸ್ರಾಯೇಲರ ದಳಾಧಿಪತಿಯಾಗಿ ಇದ್ದವನು ನೀನೇ. ನಿನ್ನ ಕುರಿತು ನಿನ್ನ ದೇವರಾದ ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವಿ’ ಎಂದು ವಾಗ್ದಾನ ಮಾಡಿದ್ದಾನೆ.” ಎಂದು ಹೇಳಿದರು.

ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು, ಇಸ್ರಾಯೇಲರ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.

ನಿನ್ನ ಆಯುಷ್ಕಾಲವು ಮುಗಿದು ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.

¶ ಆಗ ದಾವೀದನು, “ಇದೇ ದೇವರಾದ ಯೆಹೋವನ ಆಲಯ. ಇದೇ ಇಸ್ರಾಯೇಲರು ಯಜ್ಞವನ್ನು ಅರ್ಪಿಸತಕ್ಕ ಯಜ್ಞವೇದಿ” ಎಂದು ಹೇಳಿದನು.

ರೆಹಬ್ಬಾಮನು ತನ್ನ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಲಾಯಿತು. ಅವನ ಮಗನಾದ ಅಬೀಯನು ಅವನ ನಂತರ ಅರಸನಾದನು.

ಉಜ್ಜೀಯನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಕುಷ್ಠ ರೋಗಿಯದೆಂದು ಬಗೆದು, ರಾಜ ಕುಟುಂಬದ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.

ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ, ದೇಹಧಾರಿಯಾಗಿ ದೇವರನ್ನು ನೋಡುವೆನು.

ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.

ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು.

ಯೇಸು, ‹“ಆ ಕಲ್ಲನ್ನು ತೆಗೆದು ಹಾಕಿರಿ”› ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.

ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು.

ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ.