ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.
TSK
TSK · ಅಪೊಸ್ತಲರ ಕೃತ್ಯಗ 13:38
Treasury of Scripture Knowledge references in ಕನ್ನಡ IRV.
ಇಸ್ರಾಯೇಲೇ, ಯೆಹೋವನನ್ನು ಎದುರುನೋಡುತ್ತಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವುದು.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.”
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
¶ ಆ ದಿನದಲ್ಲಿ ಪಾಪವನ್ನೂ, ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ, ಯೆರೂಸಲೇಮಿನವರಿಗೂ ತೆರೆದಿರುವುದು.
¶ ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.
ಪೇತ್ರನು ಅವರಿಗೆ, “ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ, ಪಾಪಕ್ಷಮಾಪಣೆಯನ್ನೂ ದಯಪಾಲಿಸುವುದಕ್ಕಾಗಿ ಅವನನ್ನು ಪ್ರಭುವನ್ನಾಗಿಯೂ, ರಕ್ಷಕನಾಗಿಯೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.
¶ “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು.
ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.
ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.
ನಾನು ಅವರ ದುಷ್ಕೃತ್ಯಗಳನ್ನು ಕರುಣೆಯಿಂದ ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ’” ಎಂದು ಕರ್ತನು ನುಡಿಯುತ್ತಾನೆ.
ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.
¶ ನನ್ನ ಪ್ರಿಯಮಕ್ಕಳೇ, ನೀವು ಪಾಪಮಾಡದಂತೆ ಇರಲು ಇವುಗಳನ್ನು ನಿಮಗೆ ಬರೆಯುತ್ತಿದ್ದೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ.