¶ ಅದಲ್ಲದೆ ಯೆಹೋವನು ಮೋಶೆಗೆ, “ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ. ಇವರು ಮೊಂಡುತನವುಳ್ಳ ಜನರಾಗಿದ್ದಾರೆ
TSK
TSK · ಅಪೊಸ್ತಲರ ಕೃತ್ಯಗ 13:46
Treasury of Scripture Knowledge references in ಕನ್ನಡ IRV.
ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.
ಎಲೈ, ಇಸ್ರಾಯೇಲೇ, ಅವನಂತೆ ನೀನೂ ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾಮಿ ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವುದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವುದು.
‹ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ.›
‹ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.›
‹ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.›
‹ಸಮಾರ್ಯದವರಾದ›‹ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.›
¶ ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.
¶ “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
¶ ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.
ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.
¶ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.
ಅವರು ಇಸ್ರಾಯೇಲಿನ ವಂಶದವರು. ದೇವರು ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡನು; ಇವರಿಗೆ ತನ್ನ ಮಹಿಮೆಯನ್ನು ವ್ಯಕ್ತಪಡಿಸಿದನು; ಅವರ ಸಂಗಡ ದೇವರು ಒಡಂಬಡಿಕೆಗಳನ್ನು ಮಾಡಿಕೊಂಡಿದ್ದಾನೆ ಅವರಿಗೆ ಧರ್ಮಶಾಸ್ತ್ರವು, ದೇವಾಲಯದಲ್ಲಿ ನಡೆಯುವ ಆರಾಧನೆಯೂ, ವಾಗ್ದಾನಗಳೂ ಕೊಡಲ್ಪಟ್ಟವು.
¶ ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.
ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.